ಬೆಳ್ಳಾರೆ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಒಟ್ಟು 12 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಪರಾರಿಯಾದ ಇತರ ಆರೋಪಿಗಳೊಂದಿಗೆ ಸೇರಿ ಆರೋಪಿಗಳು ನಿಂತಿಕಲ್ಲು ಜಂಕ್ಷನ್ ಬಳಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ರೀತಿಯಲ್ಲಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ BNS ಕಲಂಗಳು 194(2), 352 ಹಾಗೂ 115(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಒಟ್ಟು 12 ಜನರ ವಿರುದ್ಧ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಫೆಬ್ರವರಿ 1ರಂದು ಸಂಜೆ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಕ್ಷಣವೇ ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ರವೀಂದ್ರ ಅವರು ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಿಂದ ಸಾರ್ವಜನಿಕರಿಗೆ ಆತಂಕ ಉಂಟಾಗಿದ್ದರೂ, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಪೊಲೀಸ್ ಕಾರ್ಯಾಚರಣೆಯಲ್ಲಿ ಆರೋಪಿಗಳಾದ ಕೀರ್ತನ್ ಕೆ (18), ಪುನೀತ್ ಎಂ (25), ಸತೀಶ ಎಸ್ (23) ಹಾಗೂ ನವೀನ್ ಕುಮಾರ್ ಡಿ (20) ಅವರನ್ನು ಗುರುತಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಯಾವುದೇ ಕೃತ್ಯಗಳನ್ನು ಸಹಿಸಲಾಗುವುದಿಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದು, ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *