ಕಡಬ : ಕಡಬ ಸ್ಪಂದನ ಸಮುದಾಯ ಸಹಕಾರ ಸಂಘದ ಬಿಳಿನೆಲೆ ಶಾಖೆಯು ಬಿಳಿನೆಲೆ ಗೋಕುಲ ಆರ್ಕೆಡ್ನಲ್ಲಿ ಇಂದು (ಫೆ.5) ಶುಭಾರಂಭಗೊಂಡಿತು.



ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಂಗಳೂರು ಕಾವೂರು ಶಾಖ ಮಠದ ಶ್ರೀ ಧರ್ಮ ಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಬೆಲ್ಲಾಳು ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ಶಾಖೆಯನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಕೇಶವ ಅಮೈ ಕುಲಾಯಿ ಗುತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಈ ಸಂದರ್ಭದಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಬಿಳಿನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ದಿನೇಶ್ ಗೌಡ, ಸುಳ್ಯ ಟಿಎಪಿಎಂಸಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ದಿವಾನ ಸುದರ್ಶನ ಜೋಯಿಸಾ, ವಾಸ್ತು ತಜ್ಞ ಪ್ರಸಾದ್ ಮುನಿಯಂಗಳ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಲ್ ಹಾಗೂ ನೆಟ್ಟನ ಕೆಎನ್ಎಸ್ಎಸ್ ಅಧ್ಯಕ್ಷ ಸುರೇಶ್ ನೆಟ್ಟನ ಅತಿಥಿಗಳಾಗಿ ಭಾಗವಹಿಸಿದರು.


ಒಕ್ಕಲಿಗ ಗೌಡ ಸೇವಾ ಸಂಘದ ಬಿಳಿನೆಲೆ ಗ್ರಾಮ ಸಮಿತಿಯ ಅಧ್ಯಕ್ಷ ಗುಡ್ಡಪ್ಪ ಗೌಡ ಅಮೈ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಕಳಿಗೆ ಹಾಗೂ ಬಿಳಿನೆಲೆ ಮಾಗಣೆ ಗೌಡ ದುಗ್ಗಪ್ಪ ಗೌಡ ಸೂಡ್ಲು ಗೌರವ ಉಪಸ್ಥಿತಿ ನೀಡಿದರು.
ಸಂಘದ ಉಪಾಧ್ಯಕ್ಷ ಚೇತನ್ ಆನೆಗುಂಡಿ ಹಾಗೂ ಪ್ರಬಂಧಕ ಸುರೇಶ್ ಕಾರ್ಯಕ್ರಮದ ಮಾಹಿತಿ ನೀಡಿದರು.


