ಪುತ್ತೂರು ಮೂಲದ ಯುವಕನೋರ್ವ ಇಂದು ಮುಂಜಾನೆ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಎಂದು ಗುರುತಿಸಲಾಗಿದೆ.ನಿಶಿತ್ ರವರು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣವನ್ನು ಪಡೆದು ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಊರಿಗೆ ರೈಲಿನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಮನೆಯವರಿಂದ ತಿಳಿಯಬೇಕಿದೆ

Leave a Reply

Your email address will not be published. Required fields are marked *