ವಿಟ್ಲ: ಕೊಡಂಗಾಯಿ ಸಮೀಪದ ಮೂರುಕಜೆ ಪ್ರದೇಶದಲ್ಲಿರುವ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬರ ಮೃತದೇಹ ಕೆರೆಯಲ್ಲಿ ಪತ್ತೆಯಾದ ದುರ್ಘಟನೆ ನಡೆದಿದೆ.

ಬೆಂಗಳೂರು ಮೂಲದ ವೈಗ ಲಕ್ಷ್ಮಿ (15) ಎಂಬ ವಿದ್ಯಾರ್ಥಿನಿ ನಿನ್ನೆಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ ವೇಳೆ ಇಂದು ಬೆಳಿಗ್ಗೆ ಕೆರೆಯಲ್ಲಿ ಮೃತದೇಹ ತೇಲಿಬಂದಿರುವುದು ಕಂಡುಬಂದಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಲಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ನಿಖರ ಕಾರಣ ತಿಳಿದುಬರಬೇಕಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *