ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ ಪರೋಕ್ಷವಾಗಿ ಆರೋಪಗಳನ್ನು ಮಾಡಿ ತನ್ನ ಯೂಟ್ಯೂಬ್ ಚಾನಲ್​ನಲ್ಲಿ ವಿಡಿಯೋ ಪ್ರಸಾರ ಮಾಡಿದ ಪ್ರಕರಣ ಸಂಬಂಧ ಎಂ. ಡಿ. ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣಾ ವ್ಯಾಪ್ತಿ ಕುರಿತು ಸ್ಪಷ್ಟನೆ ನೀಡಲು ರಿಜಿಸ್ಟ್ರಾರ್ ಜನರಲ್ ಕಚೇರಿಗೆ ಹೈಕೋರ್ಟ್ ಸೂಚನೆ ನೀಡಿದೆ. 

ತನ್ನ ವಿರುದ್ಧ 2025ರ ಮಾರ್ಚ್ ತಿಂಗಳಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಯೂಟ್ಯೂಬರ್ ಎಂ. ಡಿ. ಸಮೀರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

Leave a Reply

Your email address will not be published. Required fields are marked *