ಮಂಗಳೂರು:ಯುವ ಜನ ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು,ಧರ್ಮದ ಚಿಂತನೆ,ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನಾಶೀರ್ವಾದ ಸದಾ ಇರು ತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೆಶ್ ಚೌಟ ಹೇಳಿದ್ದಾರೆ.ಡಿಸೆಂಬರ್.27 ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತು ನಗರದ ಪಟ್ಟುಮುಡಿ ಸೌದದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಅವರು, ಸಾಮಾನ್ಯ ಯುವಕರೆಲ್ಲ ಸೇರಿ 9 ನೇ ವರ್ಷದ ಸಂಭ್ರಮವಾಗಿರುವುದು ಅತ್ಯಂತ ಖುಷಿಯ ವಿಚಾರ.
ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳ ನಿಷೇದವಾಗುತ್ತದೆ ಎಂದಾಗ ಅವರ ವಿರುದ್ಧ ಮಂಗಳೂರಿನಲ್ಲಿ ಪಕ್ಷ ಭೇಧವಿಲ್ಲದೆ ದೊಡ್ಡ ಪ್ರತಿಭಟನೆ ನಡೆಸಲಾಗಿತ್ತು. ಗೋಲ್ಡಪಿಂಚ್ ಸಮುಹ ಸಂಸ್ಥೆಯ ಮಾಲೀಕ ಪ್ರಕಾಶ್ ಶೆಟ್ಟಿ ಸಹಕಾರದಲ್ಲಿ ಮಂಗಳೂರು ಕಂಬಳ ಆರಂಭಿಸಿ, ಸತತ 8 ವರ್ಷಗಳಿಂದ ಅದನ್ನು ಬಹಳ ವಿಭಿನ್ನ ರೀತಿಯಲ್ಲಿ ನಡೆಸುತ್ತ ಬರಲಾಗಿದೆ. ಮಂಗಳೂರು ಕಂಬಳ ಯಶಶ್ವಿಯಾಗಿ ನಡೆಯುವುದಕ್ಕೆ ನಮ್ಮ ಯುವಕರ ತಂಡದ ಹುಮ್ಮಸ್ಸು ಪ್ರಮುಖ ಕಾರಣವಾಗಿದೆ.
ಪ್ರಧಾನಿ ಮೋದಿ ಸೇರಿದಂತೆ ದೆಹಲಿಯಲ್ಲಿರುವ ಹಲವು ಗಣ್ಯರಿಗೆ ಕ್ಯಾ. ಬ್ರಿಜೆಶ್ ಚೌಟ ಅವರು ನಮ್ಮ ಕಂಬಳದ ಬಗೆಗಿನ ಸ್ಮರಣಕ್ಕೆ ನೀ ಡುವ ಮೂಲಕ ಈ ಜನಪದ ಪ್ರೀತಿಯ ಹರಿವನ್ನು ರಾಷ್ಟ್ರ ರಾಜಧಾನಿಯಲ್ಲಿಯೂ ಮೂಡಿಸುತಿದ್ದಾರೆ.
ಕಂಬಳ ಸಮಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್
[15:15, 3/11/2025] PRIME TV: ಮಾತನಾಡಿ, ಕೂಲೂರಿನಲ್ಲಿ ಕಂಬನ ನಡೆಸಿಕೊಂಡು ಬಂದಿದ್ದು ಆ ಭಾಗದಲ್ಲಿ ಹಬ್ಬದ ಕಳೆಪಡಿದಿದೆ. ಮಂಗಳೂರು ಕಂಬಳ ಸಮಿತಿಯ ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ,ಕೂಳೂರು ಪೊಯ್ಯೇಳು ಪಿ. ರ್. ಶೆಟ್ಟಿ, ಹಂಬಲ ಸಮಿತಿಯ ಉಪಾಧ್ಯಕ್ಷರು ಹಾಗೂ ಮಾಜಿ ಮನಪಾ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂದೀಪ್ ಗರೋಡಿ, ಸಂಜಯ ಪ್ರಭು, ಕಂಬಲ ಸಮಿತಿಯ ಪ್ರಧಾನ ಕಾರ್ಯದರ್ಶಿ , ಸುಜಿತ್ ಪ್ರತಾಪ ಮಂಗಲ್ ಪಾಡಿ ಉಪಸ್ಥಿತರಿದ್ದರು. ಈಶ್ವರ್ ಪ್ರಸಾದ ಶೆಟ್ಟಿ ಸ್ವಾಗತಿಸಿದರು. ಮನ್ಮಥ ಶೆಟ್ಟಿ ಪುತ್ತೂರು ನಿರೂಪಿಸಿ, ಕಂಬಲ ಸಮಿತಿ ಸಂಚಾಲಕ ಸಚಿನ್ ಶೆಟ್ಟಿ ವಂದಿಸಿದರು

