ಪುತ್ತೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಡಿ.3ರಂದು ಸಂಜೆ ನಡೆದಿದೆ.

ಅಪಘಾತದಿಂದ ಕಾರು ಚಾಲಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ, ಕಬಕ ನಿವಾಸಿ ಸತೀಶ್ ರಾವ್, ಅವರ ಪತ್ನಿ ವೇದವಳ್ಳಿ, ಅದರ ಮೊಮ್ಮಗ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ 3ನೇ ತರಗತಿಯ ವಿದ್ಯಾರ್ಥಿ ಹಾಗೂ ಪಡುಮಲೆ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಉದಯ ಕುಮಾರ್ ಪಡುಮಲೆ ಗಾಯಗೊಂಡಿದ್ದು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕಾರ್ಯಕ್ರಮವೊಂದಕ್ಕೆ ಮಂಗಳೂರಿಗೆ ತೆರಳಿದ್ದ ಅವರು ಪುತ್ತೂರಿಗೆ ಹಿಂತಿರುಗಿ ಬರುತ್ತಿದ್ದ ವೇಳೆ ಮೆಲ್ಕಾರ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *