ವಿಟ್ಲ: ಪಂಚಲಿಂಗೇಶ್ವರ ದೇವರ ಜಾತ್ರೆಗೆ ಆಗಮಿಸಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರ ಕಳವುಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಳ ಗ್ರಾಮದ ಆಳಕೆ ಮಜಲು ನಿವಾಸಿ ವೆಂಕಮ್ಮ ಅವರು ಕರಿಮಣಿ ಸರ ಕಳವುಗೆ ಒಳಗಾಗಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ದೇವಾಲಯದ ಆವರಣದಲ್ಲಿ ಪೂಜೆ ನಡೆಸುತ್ತಿದ್ದ ವೇಳೆ ಸಂಭ್ರಮದ ಅವಧಿಯನ್ನು ದುರುಪಯೋಗಪಡಿಸಿಕೊಂಡ ಅಜ್ಞಾತರು ಕರಿಮಣಿ ಸರವನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕಳವಾದ ಕರಿಮಣಿ ಸರದ ಮೌಲ್ಯ ಸುಮಾರು 1 ಘಂಟೆಯ ಸುಮಾರಿಗೆ ನಡೆದಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *