ಬಂಟ್ವಾಳ ತಾಲೂಕು: ಕೆದಿಲ ಗ್ರಾಮದ ಪೆರಾಮುಗೇರು ನಿವಾಸಿ ಕಾರ್ತಿಕ್ ಕುಮಾರ್ (32) ಎಂಬವರು ಕಳೆದ ಏಪ್ರಿಲ್ 9ರಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಮನೆಯಿಂದ ಹೊರಟು ಹೋಗಿ ಇದುವರೆಗೆ ಮನೆಗೆ ಮರಳದೆ ಕಾಣೆಯಾಗಿರುವ ಘಟನೆ ವರದಿಯಾಗಿದೆ.
ತಂದೆ ಸೋಮಪ್ಪ ಪೂಜಾರಿ ಅವರ ಪುತ್ರನಾದ ಕಾರ್ತಿಕ್ ಕುಮಾರ್ ಅವರು ಕಳೆದ ಸುಮಾರು 20 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಈ ಕುರಿತು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಏಪ್ರಿಲ್ 10, 2026ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ಕಾರ್ಯ ನಡೆಸುತ್ತಿದ್ದಾರೆ.
ಈ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಲಭ್ಯವಾದಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ ಪುತ್ತೂರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

Leave a Reply

Your email address will not be published. Required fields are marked *