ಕಡಬ: ಮಂಗಳೂರಿನ ಫಾದರ್ ಮುಲ್ಲರ್ ಕ್ರೀಡಾಂಗಣದಲ್ಲಿ ಡಿಸೆಂಬರ್ 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ಶಿಪ್ನಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
10ನೇ ತರಗತಿಯ ವಿದ್ಯಾರ್ಥಿ ಚಿಂತನ್ ಕೆ ಅವರು ಕುಮಿಟಿ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅದೇ ತರಗತಿಯ ಡ್ಯಾಲಿ ಅವರು ಕುಮಿಟಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.





9ನೇ ತರಗತಿಯ ವಿದ್ಯಾರ್ಥಿನಿ ಕೀರ್ತಿ ಜೆ. ರೈ ಅವರು ಕುಮಿಟಿ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಸಂಸ್ಥೆಯ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಅವರು ಸೂಕ್ತ ಮಾರ್ಗದರ್ಶನ ನೀಡಿದ್ದರು. ಈ ಸಾಧನೆಗಾಗಿ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.




