ಉಪ್ಪಿನಂಗಡಿ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉಪ್ಪಿನಂಗಡಿಯ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಶಿಕ್ಷಕಿ ದುರ್ಗಾಮಣಿ ಅವರು ಮಹಿಳೆಯರ ಜೀವನ ಪದ್ಧತಿ, ಆತ್ಮವಿಶ್ವಾಸ ಹಾಗೂ ಮಹಿಳೆಯರ ಸುರಕ್ಷತೆ ಕುರಿತಾಗಿ ವಿದ್ಯಾರ್ಥಿನಿಯರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ವಿಷಯದಲ್ಲಿ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಕುಮಾರಿ ನಿವೇದಿತಾ ಅವರನ್ನು ಗೌರವಿಸಲಾಯಿತು.






ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಯಶೋಧ ಕೆ. ಗೌಡ, ಉಪ್ಪಿನಂಗಡಿ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಉಷಾ ಮುಳಿಯ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಸುಜಾತ ಕೃಷ್ಣ, ಉಪ್ಪಿನಂಗಡಿ ಪಂಚಾಯತ್ ಸದಸ್ಯೆಯರಾದ ಶ್ರೀಮತಿ ಶೋಭಾ, ಶ್ರೀಮತಿ ವೀಣಾ, ಶ್ರೀಮತಿ ಲತಾ ಹಾಗೂ ಕುಮಾರಿ ಖುಷಿತ ಉಪಸ್ಥಿತರಿದ್ದರು.



